ಉತ್ತರ ಕನ್ನಡ, ಮಡಿಕೇರಿ, ಬೀದರ್, ಕಲಬುರಗಿ, ಶಿವಮೊಗ್ಗ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳ 67 ಸ್ಥಾನಗಳಲ್ಲಿ ಕಾಂಗ್ರೆಸ್ ನ ಮೂರು ತಂಡಗಳು ಸಮೀಕ್ಷೆ ನಡೆಸಿವೆ. ‘ಹೊಂದಾಣಿಕೆ’ ರಾಜಕೀಯ ಮತ್ತು ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ 45 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ತಿಳಿದು ಬಂದಿದೆ. ಕಾರವಾರದಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ಪಕ್ಷಾತೀತ ಸಂಬಂಧ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ತುಮಕೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗ ಕೆ.ಎನ್.ರಾಜಣ್ಣ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಬಹಿರಂಗ ಸಮರ ಸಾರಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಜಿ.ಎಸ್.ಬಸವರಾಜು ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ. ಈ ಬಾರಿ ಮಧುಗಿರಿಯ ಆಕಾಂಕ್ಷಿಯಾಗಿರುವ ರಾಜಣ್ಣ ತುಮಕೂರು ನಗರದಲ್ಲಿ ಬಸವರಾಜು ಪುತ್ರ ಜಿ.ಬಿ.ಜ್ಯೋತಿಗಣೇಶ್ ಗೆ ಹಾಗೂ ಕೊರಟಗೆರೆಯಲ್ಲಿ ಪರಮೇಶ್ವರ್ ವಿರುದ್ಧ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗೆ ಸಹಾಯ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮ್ಯಾಜಿಕ್ ನಂಬರ್ 113 ತಲುಪಲು ಕಾಂಗ್ರೆ,ಸ್ ಪಕ್ಷವು ಸ್ವತಂತ್ರ ಶಾಸಕ ಶರತ್ ಬಚ್ಚೇಗೌಡ ಬಿಜೆಪಿಗೆ ಬಂದರೆ ಕೆಆರ್ ಪೇಟೆ ಶಾಸಕ ಹಾಗೂ ಸಚಿವ ನಾರಾಯಣಗೌಡ, ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್ ಮತ್ತು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷಕ್ಕೆ ಕರೆತರಲು ಸಿದ್ಧವಾಗಿದೆ. ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಕಾಂಗ್ರೆಸ್ ಗೆ ಮರಳುವ ಸಾಧ್ಯತೆ ಇಲ್ಲದಿರುವುದರಿಂದ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ಕಣಕ್ಕಿಳಿಸಲು ಪಕ್ಷ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.