ಸನ್ಮಾನ ಪ್ರಧಾನ ಮಂತ್ರಿಗಳು ಫೆಬ್ರವರಿ 6, 2023ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಹೆಚ್ಎಎಲ್ ಘಟಕ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸದರಿ ದಿನದಂದು ಭಾರಿ ಸರಕು ಸಾಗಾಣಿಕೆ ವಾಹನಗಳು ಮತ್ತು ಕೆಎಸ್ಆರ್ಟಿಸಿ ಬಸ್ಗಳು ಈ ಕೆಳಕಂಡಂತೆ ಬದಲಿ ಮಾಗðದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಸಿರುತ್ತಾರೆ.
ಫೆಬ್ರವರಿ 6 ರಂದು ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾಗðವಾಗಿ ಕೆ.ಬಿ.ಕ್ರಾಸ್ ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳನ್ನು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾಗðವಾಗಿ ನಿಟ್ಟೂರಿಗೆ ಸಂಚರಿಸುವುದು. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೋಲೀಸ್ ಇಲಾಖೆಗೆ ಸೂಚಿಸಿರುತ್ತಾರೆ.