ಸುಮಾರು ೩೦ ಕ್ಕೂ ಹೆಚ್ಚು ವಿವಿಧ ಕಂಪನಿಗಳಿಂದ ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ

ನಗರದ ಅನನ್ಯ ಇನ್ಸ್ಟಿಟ್ಯೂಟ್  ಅಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್‌ನ ಇವರ ಸಂಯುಕ್ತಾಶ್ರಯದೊಂದಿಗೆ  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ಜಿಲ್ಲಾ ಕೌಶಲ್ಯ ಮಿಷನ್, “ಸರ್ವರಿಗೂ ಉದ್ಯೋಗ” ಶೀರ್ಷಿಕೆಯಲ್ಲಿ ಉದ್ಯೋಗ ಮೇಳವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚಿತ್ರದಲ್ಲಿ ಅನನ್ಯ ಸಂಸ್ಥೆಯ ಅಧ್ಯಕ್ಷರಾದ ಸಿ.ಎ. ಎಸ್.ವಿಶ್ವನಾಥ್, ಉಪಾಧ್ಯಕ್ಷರಾದ ಬಿ.ಆರ್.ಉಮೇಶ್, ಕಾರ್ಯದರ್ಶಿಗಳಾದ ಪ್ರೊ.ಚೆನ್ನಬಸವಪ್ರಸಾದ್, ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿಯಾದ ಕೆ.ಶ್ರೀನಿವಾಸ್, ಸಹಾಯಕ ನಿರ್ದೇಶಕರಾದ ವಿಶ್ವೇಶ್ವರಯ್ಯ, ಅನನ್ಯ ಸಂಸ್ಥೆಯ ಟ್ರಸ್ಟಿಯಾದ ಡಾ.ಹೆಚ್.ಹರೀಶ್, ಪ್ರಾಂಶುಪಾಲರಾದ ಡಾ.ಎಂ.ವಿಶ್ವಾಸ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

You May Also Like