ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್ ಗೆ ಕಾಲಿಟ್ಟಿದೆ. ವೀಕ್ಷಕರು ಕಾತರದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ. ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್ ಗೆ ಕಾಲಿಟ್ಟಿದೆ. ಕಳೆದ ಮೂರೂವರೆ ವರ್ಷಗಳಿಂದ ವೀಕ್ಷಕರು ಕಾತರದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ.
ಮೊದಲ ಎಪಿಸೋಡ್ ನಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಕಾಣಿಸಿಕೊಳ್ಳಲಿದ್ದಾರೆ. ಅವರ ಭಾಗದ ಚಿತ್ರೀಕರಣ ಇಂದು ಆರಂಭವಾಗಲಿದೆ ಎಂದು ರಾಘವೇಂದ್ರ ಹುಣಸೂರು ಮಾಹಿತಿ ನೀಡಿದರು. ನಟಿ, ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಎರಡನೇ ಎಪಿಸೋಡ್ ನಲ್ಲಿ ಕನ್ನಡ ಸೇರಿದಂತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ, ಅದ್ಭುತ ನೃತ್ಯಗಾರ ಪ್ರಭುದೇವ ಸಾಧಕರ ಕುರ್ಚಿಯ ಮೇಲೆ ಕೂರಲಿದ್ದಾರೆ. ನಟ, ನಿರ್ದೇಶಕ ಪ್ರಭುದೇವ ಈ ಸೀಸನ್ನಲ್ಲಿ ನಟ ಧ್ರುವ ಸರ್ಜಾ, ನಟಿ ರಚಿತಾ ರಾಮ್, ನಟಿ ಮಾಲಾಶ್ರೀ, ಇಶಾ ಫೌಂಡೇಶನ್ನ ಜಗ್ಗಿ ವಾಸುದೇವ್ , ಖ್ಯಾತ ಹೃದ್ರೋಗ ತಜ್ಞ ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸದ್ಗುರು ಜಗ್ಗಿ ವಾಸುದೇವ ವಿಶೇಷವೆಂದರೆ ಇನ್ನು 16 ಸಾಧಕರ ಬಳಿಕ ನೂರನೇ ಸಾಧಕರು ಬರಲಿದ್ದು, ಆ ಎಪಿಸೋಡ್ಗೆ ಬಹಳ ವಿಶೇಷ ಅತಿಥಿಯೊಬ್ಬರು ಸಾಧಕರ ಕುರ್ಚಿ ಏರಲಿದ್ದಾರೆ. ನೂರನೇ ಎಪಿಸೋಡ್ಗೆ ಬರುವ ಅತಿಥಿ ಆ ಚೇರ್ಗೆ ನ್ಯಾಯ ಕೊಡಲಿದ್ದಾರೆ ಎಂದರು ನಟ ರಮೇಶ್ ಅರವಿಂದ್. ಇಲ್ಲಿಯವರೆಗೂ 84 ಸಾಧಕರು ಕುರ್ಚಿಯ ಮೇಲೆ ಕೂತಿದ್ದು 110 ಸಂಚಿಕೆಗಳು ಪ್ರಸಾರವಾಗಿವೆ. ಇನ್ನು 16 ಸಾಧಕರು ಅದ ಬಳಿಕ ಸೆಂಚುರಿ ಬಾರಿಸುತ್ತೇವೆ. ಸಿನಿಮಾದಲ್ಲಿಯೂ ಸೆಂಚುರಿ ಹೊಡಿದಿದ್ದೇನೆ ಎಂದು ಹೇಳಿದರು.