ತುಮಕೂರು: ವಿಧಾನ ಸಭಾ ಚುನಾವಣೆಗೆ ಸಂಬ0ಧಿಸಿದ0ತೆ ಯಾವುದೇ ಸಮಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗುವ ಸಂಭವವಿದ್ದು, ನೀತಿ ಸಂಹಿತೆ ಜಾರಿ ಅವಧಿಯಲ್ಲಿ ದಾಖಲೆ ರಹಿತ 10,000ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ವಸ್ತು ಹಾಗೂ 50,000 ರೂ.ಗಳಿಗಿಂತ ಹೆಚ್ಚಿನ ಮೊತ್ತದ ಹಣವನ್ನು ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ದಾಖಲಾತಿ ಇಲ್ಲದೆ 50,000 ರೂ.ಗಳಿಗಿಂತ ಹೆಚ್ಚಿನ ಮೊತ್ತದ ಹಣ ಸಾಗಾಣಿಕೆ ಮಾಡಿದಲ್ಲಿ ಸಂಬ0ಧಿಸಿದ ಚೆಕ್ಪೋಸ್ಟ್ ಅಧಿಕಾರಿಗಳು ಹಾಗೂ ಫ್ಲೆöÊಯಿಂಗ್ ಸ್ಕಾ÷್ವಡ್ ತಂಡ ಆ ಹಣವನ್ನು ಜಪ್ತಿ ಮಾಡಬೇಕೆಂದು ನಿರ್ದೇಶನ ನೀಡಿದರು.
ನೀತಿ ಸಂಹಿತೆ ಜಾರಿಯಾದ ಕೂಡಲೇ ಸಾರ್ವಜನಿಕರು ಅನಧಿಕೃತವಾಗಿ ಹೆಚ್ಚಿನ ಮೊತ್ತದ ಹಣವನ್ನು ಸಾಗಾಣಿಕೆ ಮಾಡುವಂತಿಲ್ಲ. ದಾಖಲೆ ಸಹಿತ 10ಲಕ್ಷ ರೂ.ಗಳಿಗಿಂತ ಮೇಲ್ಪಟ್ಟ ಹಣವನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್, ಡಾ: ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ರಾಜು, ಪಾಲಿಕೆ ಆಯುಕ್ತ ದರ್ಶನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ, ಅಬಕಾರಿ ಉಪ ಆಯುಕ್ತೆ ಶೈಲಜ, ವಾಣಿಜ್ಯ ತೆರಿಗೆ ಇಲಾಖೆಯ ನಾಗರಾಜು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.